September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

ಉಜಿರೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳ ನೋಂದಾವಣಿ ಶಿಬಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜ.20 ರಂದು ನಡೆಯಿತು.

ಶಿಬಿರವನ್ನು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ .ಬಿಎ ಕುಮಾರ ಹೆಗ್ಡೆ ಉದ್ಘಾಟಿಸಿ ಈ ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗಪಡಿಸಿಕೊಂಡು ಈ ಯೋಜನೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಈ ಯೋಜನೆಯಿಂದ ತಾಲೂಕಿಗೆ ಬಿಡುಗಡೆಯಾದ ಅನುದಾನದ ವಿವರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇಲ್ಲಿಯ ಅಧಿಕಾರಿ ಶ್ರೀಮತಿ ಮಂಜುಷಾ ಪದೇಲ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಪ್ರಶಾಂತ್ ಡಿ ಬಳಂಜ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಶ್ರೀಮತಿ ಸೌಮ್ಯ ಲಾಯಿಲ, ಮರೀಟಾ ಪಿಂಟೋ, ಶರೀಫ್ ಸಬರಬೈಲು, ಹಕೀಮ್ ಕೊಕ್ಕಡ, ಯತೀಶ್ ಧರ್ಮಸ್ಥಳ, ಕೇಶವ ನಾಯ್ಕ ಉಪಸ್ಥಿತರಿದ್ದರು.

ತಾಲೂಕು ನೋಡಲ್ ಅಧಿಕಾರಿ ಹೇರಾಲ್ಡ್ ಸಿಕ್ವೆರಾ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!