July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ.20ರಿಂದ 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಇಂದು ಬೆಳಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ, ಪಲ್ಲಕ್ಕಿ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಭಜನಾ ಕಾರ್ಯಕ್ರಮ, ಸಂಜೆ 5.30ಕ್ಕೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.30ಕ್ಕೆ ಮಹಾಪೂಜೆ, ನಡೆಯಲಿದೆ.

Related posts

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya
error: Content is protected !!