23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ. 19 ರಂದು ಗೌರವಿಸಿ ಸನ್ಮಾನಿಸಲಾಯಿತು.

ಬಳಂಜ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರನ್ನು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಹಾಗೂ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.

ಸುಮಾರು 46 ವರ್ಷಗಳ ಪರಂಪರೆಯಿರುವ ಬಳಂಜ ಬಿಲ್ಲವ ಸಂಘವು ಸಮಾಜಮುಖಿಯಾಗಿ ಗುರುತಿಸಿಕೊಂಡಿದೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ, ಕ್ರೀಡೆ, ಸಾಂಸ್ಕೃತಿಕ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ ಸಂಘವಾಗಿದೆ. ಸಂಘದ ಕಾರ್ಯವೈಖರಿಗೆ ಈ ಬಾರಿ ಸರಕಾರದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ.

ಸನ್ಮಾನ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ‌ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಕಾರ್ಯದರ್ಶಿ ಗಂಗಾಧರ, ಬಳಂಜ ಸಂಘದ ನಿರ್ದೇಶಕರಾದ ದಿನೇಶ್ ಪೂಜಾರಿ ಅಂತರ, ರಂಜಿತ್ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಸದಸ್ಯೆ ಅಮೃತಾ ಎಸ್ ಕೋಟ್ಯಾನ್, ಬೇಬಿ! ಸ್ಮಯ ಎಸ್ ಕೋಟ್ಯಾನ್ ಜೊತೆಗಿದ್ದರು.

Related posts

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!