37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ರವರ ಅಧ್ಯಕ್ಷತೆಯಲ್ಲಿ ಜ.20 ರಂದು ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯ ಪ್ರವೀಣ್ ಹೆಬ್ಬಾರ್, ಶ್ರೀಮತಿ ಶೈಲಜಾ, ಮೋಹನ್ ಪೂಜಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಕೆ.ಪಿ. ಕೇಶವ ಗೌಡ ನಿರೂಪಿಸಿದರು. ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಜಿ.ಪಿ.ಡಿ.ಪಿ. ಬಗ್ಗೆ ಮಾಹಿತಿ ನೀಡಿದರು. ಸದಸ್ಯೆ ಶ್ರೀಮತಿ ಹೇಮಾವತಿ ಧನ್ಯವಾದವಿತ್ತರು.

Related posts

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!