24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya
error: Content is protected !!