25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!