July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!