July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya
error: Content is protected !!