25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ ಹಾಗೂ ಸ್ನಾತ್ತಕೋತ್ತರ ವಿಭಾಗವು ಮೈಸೂರಿನ ಕೆರಿಯರ್ ಸ್ಪಾರ್ಕ್ ಹಾಗೂ ವನಮಾಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸಹಯೋಗದೊಂದಿಗೆ “ಕೆರಿಯರ್ ಆಪರ್ಚುನಿಟಿ ಅಂಡ್ ಜಾಬ್ ಪ್ಲೇಸ್ಮೆಂಟ್” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ಕೆರಿಯರ್ ಸ್ಪಾರ್ಕ್ ಮತ್ತು ವನಮಲ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಪ್ರಸಾದ್ ಎಸ್. ಎಂ. ಭಾಗವಹಿಸಿ , ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಪಡೆದುಕೊಳ್ಳಲು ಇರುವ ಅವಕಾಶಗಳು ಅದಕ್ಕೆ ಬೇಕಾಗಿರುವ ವಿವಿಧ ಕೌಶಲ್ಯಗಳ ಬಗ್ಗೆ ತಿಳಿಸಿ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಸುರೇಶ್ ವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ. ಏನ್., ಪ್ರಾಧ್ಯಾಪಕರಾದ ಪ್ರೊ| ನವೀನ್ ಹಾಗೂ ಪ್ರೊ| ಮಾರುತಿ ಉಪಸ್ಥಿತರಿದ್ದರು.

ಕು| ಅಶ್ವಿತಾ ಮತ್ತು ಪ್ರಜ್ಞಾ ಪ್ರಾರ್ಥನೆ ನೆರವೇರಿಸಿದರು. ಕು| ಅನನ್ಯ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya
error: Content is protected !!