April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.21ರಂದು ನಡೆಸಲಾಯಿತು.

ಶಿಬಿರವು ತಾಲೂಕು ವಿಕಲಚೇತನರ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಹಾಗೂ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು , ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!