23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!