April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾಡುಪ್ರಾಣಿಗಳ ಉಪಟಳದಿಂದ ಬೆಳೆ ನಾಶವಾಗುತ್ತಿದೆ. ಪೆರಾಡಿ ಅಂಗನವಾಡಿ ಸುತ್ತ ಮುತ್ತ ದೊಡ್ಡ ಗಾತ್ರದ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಮರೋಡಿ- ಪೆರಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಹೇಳಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಗಣೇಶ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಎಲ್ಲರನ್ನು ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆ ,ಜಮಾಖರ್ಚಿನ ವಿವರಗಳನ್ನು ಸಭೆಯ ಮುಂದಿಟ್ಟರು.

ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪದ್ಮಶ್ರೀ, ಉಮೇಶ್ ಸಾಲಿಯಾನ್, ಅಶೋಕ್ ಪೂಜಾರಿ, ಧನಲಕ್ಷ್ಮಿ, ಸಮಿತಾ, ಉಮಾವತಿ, ಸುನಂದ, ಯಶೋಧ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!