24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾಡುಪ್ರಾಣಿಗಳ ಉಪಟಳದಿಂದ ಬೆಳೆ ನಾಶವಾಗುತ್ತಿದೆ. ಪೆರಾಡಿ ಅಂಗನವಾಡಿ ಸುತ್ತ ಮುತ್ತ ದೊಡ್ಡ ಗಾತ್ರದ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಮರೋಡಿ- ಪೆರಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಹೇಳಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಗಣೇಶ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಎಲ್ಲರನ್ನು ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆ ,ಜಮಾಖರ್ಚಿನ ವಿವರಗಳನ್ನು ಸಭೆಯ ಮುಂದಿಟ್ಟರು.

ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪದ್ಮಶ್ರೀ, ಉಮೇಶ್ ಸಾಲಿಯಾನ್, ಅಶೋಕ್ ಪೂಜಾರಿ, ಧನಲಕ್ಷ್ಮಿ, ಸಮಿತಾ, ಉಮಾವತಿ, ಸುನಂದ, ಯಶೋಧ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!