23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ, ಹಾಗೂ ಸಂಘ ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಸೌಲಭ್ಯ ಸವಲತ್ತು ವಿತರಣೆ ಮಾಡಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಗಣೇಶ ಬಂಗೇರ ವಹಿಸಿದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸುಮಾ, ಅಶ್ವಿನಿ ಅರವಿಂದ ಹೆಬ್ಬಾರ್, ಪ್ರಹ್ಲಾದ್ ಫಡ್ಕೆ, ಸೆಬಾಸ್ಟಿಯನ್ ವಿ ಸಿ, ಅಬೂಬಕ್ಕರ್ ಶಿರ್ತಾಡಿ ಉಪಸ್ಥಿತರಿದ್ದರು.


ವಿಕಲಚೇತನರ ಪುನರವಸತಿ ಕಾರ್ಯ ವಿಭಾಗದ ಜೋಸೆಫ್ ಇಂದಬೆಟ್ಟು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಮುಂಡಾಜೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿರರು ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಾಹಿತಿಯನ್ನು ನಡೆಸಿ ಕೊಟ್ಟರು, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಜೊತೆಗಿದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಕಲ ಚೇತನ ಫಲಾನುಭವಿ ವಿದ್ಯಾರ್ಥಿಯರಿಗೆ ಗ್ರಾಮ ಪಂಚಾಯಿತಿ 5%ರ, ಅನುದಾನ ಶಿಕ್ಷಣಕ್ಕೆ ಸಹಾಯದ ಉದ್ದೇಶ ಚೆಕ್ ವಿತರಣೆ ಮಾಡಲಾಯಿತು. ಭಾಗವಹಿಸಿದ ಎಲ್ಲರಿಗೂ ನೆನಪಿನ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿಕಲ ಚೇತನರಿಗೆ ಮತ್ತು ತಂದೆ ತಾಯಿ ಮರಣದ ಮಕ್ಕಳಿಗೆ ಸೆಬಾಸ್ಟಿಯನ್ ಮುಂಡಾಜೆ ರವರು ನೀಡಲಾದ ಸ್ಕೂಲ್ ಬ್ಯಾಗ್, ಬಟ್ಟೆ, ವಸ್ತುಗಳನ್ನು ವಿತರಿಸಲಾಯಿತು. 72ಫಲಾನುಭವಿಗಳಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿ, ವಂದಿಸಿದರು. ಮುಂಡಾಜೆ ಗ್ರಾಮೀಣ ಪುನರ್ ವಸತಿ ಕಾರ್ಯ ವಿಭಾಗದ ವಿ ಆರ್ ಡಬ್ಲ್ಯೂ ಮಜೀದ್ ನಿಡಿಗಲ್ ಪ್ರಾಸ್ತಾವಿಕ ವರದಿ ಮಂಡಿಸಿದರು,
ಬೆಳ್ತಂಗಡಿ ತಾ.ಪಂ.ಸಂಯೋಜಕ ಜಯಾನಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!