23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ವಹಿಸಿಕೊಂಡು ವಿಶೇಷ ಚೇತನ ಮಕ್ಕಳು ದೇವರ ಸಮಾನ ಅವರನ್ನು ದೇವರಾಗಿ ಕಾಣಿ ಹೊರತಾಗಿ ಹೊರೆಯಾಗಿ ಕಾಣಬೇಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರೋತ್ಸಾಹವನ್ನು ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ನೆರವೇರಿಸಿ ವಿಶೇಷ ಚೇತನರು ದೇವರ ಮಕ್ಕಳು ದೇವರ ಆಲಯಕ್ಕೆ ಇಂದು ನಾನು ಬಂದಿದ್ದೇನೆ .ವಿಶೇಷ ಚೇತನರು ಅಬಲರಲ್ಲ ಸಬಲರು ಅನುಕಂಪ ಹೊರತಾಗಿ ಅವಕಾಶ ನೀಡಬೇಕು ಎಂದು ಹೇಳಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಿದ ತಾಲೂಕು ವಿವಿಧೋದ್ದೇಶ ಪುನರ್ವಸತಿ ಸಂಯೋಜಕ ಜೋನ್ ಬ್ಯಾಷ್ಟಿಸ್ಟ್ ಡಿಸೋಜಾ ಮಾತನಾಡಿ ತಾಲೂಕಿನಲ್ಲಿ 48 ಗ್ರಾಮಗಳಲ್ಲಿ ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಡೆದ ಈ ಸಭೆಯು ತಾಲೂಕಿಗೆ ಮಾದರಿ ಇದು ಪಂಚಾಯತ್ ಆಡಳಿತ ಮಂಡಳಿ ಮತ್ತು ಊರ ದಾನಿಗಳ ಸಹಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು .

ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಜಾಹ್ನವಿ ಇವರನ್ನು ಸನ್ಮಾನಿಸಿ ವಸಂತ ಮರಕಡ ಇವರು ಪ್ರೋತ್ಸಾಹ ಧನ ನೀಡಿದರು ಹಾಗೂ ಅಶೋಕ್ ನಾಯ್ಕ ಪಲ್ಲಿದಡ್ಕ ಹೇಮನಾಥ್ ನಾಯ್ಕ ಸುರುಳಿ ಇವರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ವತಿಯಿಂದ 12 ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ದಾನಿಗಳಾದ ಜಯಣ್ಣ ಮಿನಂದೇನುಲು, ಶ್ರೀನಿವಾಸ್ ಗೌಡ ನೋಟರಿ ವಕೀಲರು, ಸುರೇಶ್ ದಾಸ್ ಗಾಂಧಿನಗರ ಮಾಯಾ, ಲಕ್ಷ್ಮಣ ಪೂಜಾರಿ ಪಳಸಾ ಮಾಯ 57 ವಿಕಲಚೇತನರಿಗೆ ತಲಾ 5 ಕೆಜಿ ಅಕ್ಕಿಯನ್ನು ನೀಡಿದರು.

ಶಾಮಿಯಾನದ ಪ್ರಯೋಜಕರಾದ ಅರ್ಚನ್ ಸೌತೆ ಗದ್ದೆ, ಸೌಂಡ್ ಪ್ರಯೋಜಕರಾಗಿ ಸಂತೋಷ್ ಕನಿಕಿಲ, ಊಟೋಪಚಾರದ ಪ್ರಾಯೋಜಕರಾಗಿ ವಿಮಲಾ ನಾಯ್ಕ, ಕಾರ್ಯದರ್ಶಿ ಕಾವಲಪಡೂರು ಸಹಕರಿಸಿದರು.

ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯಿತಿನ ಸದಸ್ಯರಾದ ದಿನೇಶ್ ಕೋಟ್ಯಾನ್ ಸತೀಶ್ ಎಳ್ಳುಗದ್ದೆ ,ಶ್ರೀಮತಿ ಪ್ರೇಮ , ಶ್ರೀಮತಿ ಓಬಕ್ಕ, ಯೋಗೀಶ್ ಸೌತೆ ಗದ್ದೆ ,ಜಯರಾಮ ಮಯ್ಯ ಮುಖ್ಯ ಉಪಾಧ್ಯಾಯರು ,ಎಂ ಜೆ ಜೋಸೆಫ್ ವಿ ಆರ್ ಡಬ್ಲ್ಯೂ ಇಂದಬೆಟ್ಟು ಮಜೀದ್ ಮುಂಡಾಜೆ ಉಪಸ್ಥಿತರಿದ್ದರು.

ನಾಡಗೀತೆಯನ್ನು ಪಂಚಾಯಿತಿ ಸಿಬ್ಬಂದಿ ಶಶಿಧರ ಓಡಿಪ್ರೊಟ್ಟು ಹಾಡಿ , ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್ ಸ್ವಾಗತಿಸಿ, ಈರಣ್ಣ ವಿ ಆರ್ ಡಬ್ಲ್ಯೂ ಬೆಳಾಲು ಪ್ರಸ್ತಾವಿಕ ಹಾಗೂ ನಿರೂಪಿಸಿದರು. ಸದಸ್ಯ ಸತೀಶ್ ಎಳ್ಳುಗದ್ದೆ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya
error: Content is protected !!