23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾಡುಪ್ರಾಣಿಗಳ ಉಪಟಳದಿಂದ ಬೆಳೆ ನಾಶವಾಗುತ್ತಿದೆ. ಪೆರಾಡಿ ಅಂಗನವಾಡಿ ಸುತ್ತ ಮುತ್ತ ದೊಡ್ಡ ಗಾತ್ರದ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಮರೋಡಿ- ಪೆರಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಹೇಳಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಗಣೇಶ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಎಲ್ಲರನ್ನು ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆ ,ಜಮಾಖರ್ಚಿನ ವಿವರಗಳನ್ನು ಸಭೆಯ ಮುಂದಿಟ್ಟರು.

ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪದ್ಮಶ್ರೀ, ಉಮೇಶ್ ಸಾಲಿಯಾನ್, ಅಶೋಕ್ ಪೂಜಾರಿ, ಧನಲಕ್ಷ್ಮಿ, ಸಮಿತಾ, ಉಮಾವತಿ, ಸುನಂದ, ಯಶೋಧ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya
error: Content is protected !!