September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಮರೋಡಿ: ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಜ. 21 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾಡುಪ್ರಾಣಿಗಳ ಉಪಟಳದಿಂದ ಬೆಳೆ ನಾಶವಾಗುತ್ತಿದೆ. ಪೆರಾಡಿ ಅಂಗನವಾಡಿ ಸುತ್ತ ಮುತ್ತ ದೊಡ್ಡ ಗಾತ್ರದ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಮರೋಡಿ- ಪೆರಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಹೇಳಿದರು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ಗಣೇಶ್ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್ ಎಲ್ಲರನ್ನು ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆ ,ಜಮಾಖರ್ಚಿನ ವಿವರಗಳನ್ನು ಸಭೆಯ ಮುಂದಿಟ್ಟರು.

ಪಂಚಾಯತ್ ಉಪಾಧ್ಯಕ್ಷ ಶುಭರಾಜ್ ಹೆಗ್ಡೆ, ಪಂಚಾಯತ್ ಸದಸ್ಯರಾದ ಪದ್ಮಶ್ರೀ, ಉಮೇಶ್ ಸಾಲಿಯಾನ್, ಅಶೋಕ್ ಪೂಜಾರಿ, ಧನಲಕ್ಷ್ಮಿ, ಸಮಿತಾ, ಉಮಾವತಿ, ಸುನಂದ, ಯಶೋಧ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!