July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಅರಣ್ಯ ಅಧಿಕಾರಿ ಅಶೋಕ್ ವಹಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ . ಲೆಕ್ಕ ಪತ್ರವನ್ನು ಸಭೆಗೆ ಮಂಡಿಸಿದರು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ, ಪಸು ಸಂಗೋಪನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಗ್ರಾಮ ಸಭೆಯಲ್ಲಿ ಇಲಾಖಾ ಮಾಹಿತಿ ನೀಡಿದರು.

ಈ ವೇಳೆ ವಿಶೇಷ ವಿಕಲಚೇತನರ 13 ಮಂದಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ಪಂಚಾಯತಿ ಸ್ವಂತ ನಿಧಿ ಅನುದಾನದಿಂದ 6 ಶಾಲೆಗಳಾದ ಗೇರುಕಟ್ಟೆ ಪ್ರೌಢಶಾಲೆ, ಕೊರಿಂಜ ಪ್ರಾಥಮಿಕ ಶಾಲೆ, ನಾಳ ಹಿರಿಯ ಪ್ರಾಥಮಿಕ ಶಾಲೆ, ಗೋವಿಂದರ ಶಾಲೆ, ರಕ್ತೇಶ್ವರಿ ಪದವು, ಬೊಳ್ಳುಕಲ್ಲು ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯಕುಮಾರ್, ಸುಧಾಕರ್, ಕುಸುಮ ಎನ್. ಬಂಗೇರ, ಮರಿಟಾ ಪಿಂಟೋ, ಶ್ವೇತಾ, ಯಶೋಧರ ಶೆಟ್ಟಿ , ಅಬ್ದುಲ್ ಲತೀಫ್, ಮೋಹಿನಿ, ಪುಷ್ಪಲತಾ ಅಬ್ದುಲ್ ಕರೀಂ, ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞಿ ಉಪಸ್ಥಿತರಿದ್ದರು.

Related posts

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!