23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya
error: Content is protected !!