24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya
error: Content is protected !!