25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!