29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಅರಣ್ಯ ಅಧಿಕಾರಿ ಅಶೋಕ್ ವಹಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ . ಲೆಕ್ಕ ಪತ್ರವನ್ನು ಸಭೆಗೆ ಮಂಡಿಸಿದರು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ, ಪಸು ಸಂಗೋಪನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಗ್ರಾಮ ಸಭೆಯಲ್ಲಿ ಇಲಾಖಾ ಮಾಹಿತಿ ನೀಡಿದರು.

ಈ ವೇಳೆ ವಿಶೇಷ ವಿಕಲಚೇತನರ 13 ಮಂದಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ಪಂಚಾಯತಿ ಸ್ವಂತ ನಿಧಿ ಅನುದಾನದಿಂದ 6 ಶಾಲೆಗಳಾದ ಗೇರುಕಟ್ಟೆ ಪ್ರೌಢಶಾಲೆ, ಕೊರಿಂಜ ಪ್ರಾಥಮಿಕ ಶಾಲೆ, ನಾಳ ಹಿರಿಯ ಪ್ರಾಥಮಿಕ ಶಾಲೆ, ಗೋವಿಂದರ ಶಾಲೆ, ರಕ್ತೇಶ್ವರಿ ಪದವು, ಬೊಳ್ಳುಕಲ್ಲು ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯಕುಮಾರ್, ಸುಧಾಕರ್, ಕುಸುಮ ಎನ್. ಬಂಗೇರ, ಮರಿಟಾ ಪಿಂಟೋ, ಶ್ವೇತಾ, ಯಶೋಧರ ಶೆಟ್ಟಿ , ಅಬ್ದುಲ್ ಲತೀಫ್, ಮೋಹಿನಿ, ಪುಷ್ಪಲತಾ ಅಬ್ದುಲ್ ಕರೀಂ, ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞಿ ಉಪಸ್ಥಿತರಿದ್ದರು.

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!