37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ. 23 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಇಂದು(ಜ.22) ಬೆಳಿಗ್ಗೆ ಮಹಾಗಣಪತಿ ಹೋಮ, ನಾಂದೀಪುಣ್ಯಾಹ, ರತ್ನನ್ಯಾಸಾದಿ ಪೀಠಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಕ್ರಿಯೆ, ಜೀವಕಲಶಾಭಿಷೇಕ, ಪ್ರತಿಷ್ಠಾ ಪೂಜೆ, ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕವು ವಿಜೃಂಭಣೆಯಿಂದ ಜರುಗಿತು,

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಕಳೆಂಜ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಅಶೋಕ್ ಭಟ್ ಕಾಯಡ, ಬ್ರಹಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೇಶವ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಚಂದ್ರಶೇಖರ ಕೆ., ಆಡಳಿತ ಸಮಿತಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಬ್ರಹ್ಮಕಲಶೋತ್ಸವ ಸಮಿತಿ ಖಜಾಂಜಿ ವೆಂಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ.

Related posts

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!