25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಅರಣ್ಯ ಅಧಿಕಾರಿ ಅಶೋಕ್ ವಹಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ . ಲೆಕ್ಕ ಪತ್ರವನ್ನು ಸಭೆಗೆ ಮಂಡಿಸಿದರು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ, ಪಸು ಸಂಗೋಪನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಗ್ರಾಮ ಸಭೆಯಲ್ಲಿ ಇಲಾಖಾ ಮಾಹಿತಿ ನೀಡಿದರು.

ಈ ವೇಳೆ ವಿಶೇಷ ವಿಕಲಚೇತನರ 13 ಮಂದಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ಪಂಚಾಯತಿ ಸ್ವಂತ ನಿಧಿ ಅನುದಾನದಿಂದ 6 ಶಾಲೆಗಳಾದ ಗೇರುಕಟ್ಟೆ ಪ್ರೌಢಶಾಲೆ, ಕೊರಿಂಜ ಪ್ರಾಥಮಿಕ ಶಾಲೆ, ನಾಳ ಹಿರಿಯ ಪ್ರಾಥಮಿಕ ಶಾಲೆ, ಗೋವಿಂದರ ಶಾಲೆ, ರಕ್ತೇಶ್ವರಿ ಪದವು, ಬೊಳ್ಳುಕಲ್ಲು ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯಕುಮಾರ್, ಸುಧಾಕರ್, ಕುಸುಮ ಎನ್. ಬಂಗೇರ, ಮರಿಟಾ ಪಿಂಟೋ, ಶ್ವೇತಾ, ಯಶೋಧರ ಶೆಟ್ಟಿ , ಅಬ್ದುಲ್ ಲತೀಫ್, ಮೋಹಿನಿ, ಪುಷ್ಪಲತಾ ಅಬ್ದುಲ್ ಕರೀಂ, ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞಿ ಉಪಸ್ಥಿತರಿದ್ದರು.

Related posts

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!