23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಅರಣ್ಯ ಅಧಿಕಾರಿ ಅಶೋಕ್ ವಹಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ . ಲೆಕ್ಕ ಪತ್ರವನ್ನು ಸಭೆಗೆ ಮಂಡಿಸಿದರು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ, ಪಸು ಸಂಗೋಪನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಗ್ರಾಮ ಸಭೆಯಲ್ಲಿ ಇಲಾಖಾ ಮಾಹಿತಿ ನೀಡಿದರು.

ಈ ವೇಳೆ ವಿಶೇಷ ವಿಕಲಚೇತನರ 13 ಮಂದಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ಪಂಚಾಯತಿ ಸ್ವಂತ ನಿಧಿ ಅನುದಾನದಿಂದ 6 ಶಾಲೆಗಳಾದ ಗೇರುಕಟ್ಟೆ ಪ್ರೌಢಶಾಲೆ, ಕೊರಿಂಜ ಪ್ರಾಥಮಿಕ ಶಾಲೆ, ನಾಳ ಹಿರಿಯ ಪ್ರಾಥಮಿಕ ಶಾಲೆ, ಗೋವಿಂದರ ಶಾಲೆ, ರಕ್ತೇಶ್ವರಿ ಪದವು, ಬೊಳ್ಳುಕಲ್ಲು ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯಕುಮಾರ್, ಸುಧಾಕರ್, ಕುಸುಮ ಎನ್. ಬಂಗೇರ, ಮರಿಟಾ ಪಿಂಟೋ, ಶ್ವೇತಾ, ಯಶೋಧರ ಶೆಟ್ಟಿ , ಅಬ್ದುಲ್ ಲತೀಫ್, ಮೋಹಿನಿ, ಪುಷ್ಪಲತಾ ಅಬ್ದುಲ್ ಕರೀಂ, ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞಿ ಉಪಸ್ಥಿತರಿದ್ದರು.

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya
error: Content is protected !!