23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!