24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!