25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya
error: Content is protected !!