September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!