23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!