26.9 C
ಪುತ್ತೂರು, ಬೆಳ್ತಂಗಡಿ
June 7, 2025
Uncategorizedಗ್ರಾಮಾಂತರ ಸುದ್ದಿ

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

ಅಳದಂಗಡಿ:-. ಅನಾಥವಾಗಿ ತಿರುಗಾಡುತ್ತಿದ್ದ ವಯೋವೃದ್ಧ
ರೋವ೯ರನ್ನು ಅಳದಂಗಡಿ ಹಿಂದೂ ಆಲಡ್ಕ ಕ್ಷೇತ್ರ ಸಂಘಟನೆಯವರು ಜ.22 ರಂದು ಶ್ರೀಗುರು ಚೈತನ್ಯ ಸೇವಾ ಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಬಾಡ ಎಂಬ ವಯೋ ವೃದ್ದರು ನಿರ್ಗತಿಕರಾಗಿ ಹಲವಾರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳ ಮುಂಬಾಗ ,ಮರಗಳ ಕೆಳಗೆ ಹೀಗೆ ಅನಾಥವಾಗಿ ಇರುತ್ತಿದ್ದರು. ಯಾರಿಂದಲೂ ಕೈ ಚಾಚದೆ ,ಯಾರಿಗೂ ಕಿರಿಕಿರಿ ಉಂಟು ಮಾಡದೆ ಸ್ವಾಭಿಮಾನಿಯಾಗಿದ್ದು ಬಾಡಜ್ಜ ಎಂದು ಸಾರ್ವಜನಿಕರಿಂದ ಕರೆಯಲ್ಪಡುತ್ತಿದ್ದರು. ಸ್ಥಳೀಯರು ನೀಡಿದ ಅನ್ನ ಆಹಾರ ಸೇವಿಸುತ್ತಾ ಇದ್ದರು ಇತ್ತೀಚೆಗೆ ಕೆಲವು ದಿನಗಳಿಂದ ವಿಪರೀತವಾಗಿ ಚೈತನ್ಯ ಕಳೆದುಕೊಂಡಿದ್ದು ಇದನ್ನರಿತ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ಸಮಾಜ ಸೇವಾ ಸಂಘಟನೆಯು ಅಳದಂಗಡಿ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿ ವೇಣೂರು ಗುಂಡೂರಿಯ ಶ್ರೀ ಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯ ಕುಲಾಲ್ ಕಾಟಿಪಳ್ಳ ರ ಮಾರ್ಗದರ್ಶನ ದಂತೆಯೇ ವೇಣೂರಿನ ಪೋಲೀಸ್ ಠಾಣೆಗೆ ಮಾಹಿತಿ ನೀಡಿ ವೀರಕೇಸರಿ ಬಳಂಜ ಇವರ ಅಂಬುಲೆನ್ಸ್ ನಲ್ಲಿ ಕರೆದೊಯ್ದು ವೇಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಬಳಿಕ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ಸೇರಿಸಲಾಯಿತು .ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಮತ್ತು ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ಪೂರ್ಣಿಮ ಜೆ , ಗ್ರಾ. ಪಂ. ಸದಸ್ಯರಾದ ಹರೀಶ್ ಆಚಾರ್ಯ ಮಿತ್ತರೋಡಿ, ಅಳದಂಗಡಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕೊರಗಪ್ಪ , ಸಾಮಾಜಿಕ ಕಾರ್ಯಕರ್ತೆ ಹರಿಣಿ ಲಕ್ಷ್ಮಣ ಪೂಜಾರಿ ,ಕೀರ್ತನ್ ಇವರುಗಳು ಸಹಕರಿಸಿದರು.ಈ ಅನಾಥ ವಯೋ ವೃದ್ದರ ಬಂಧುಬಳಗ ದವರ ಮಾಹಿತಿ ಇದ್ದಲ್ಲಿ ವೇಣೂರು ಪೋಲೀಸ್ ಠಾಣೆಗೆ ನೀಡಿ ಸಹಕರಿಸಬೇಕು ಎಂದು ಶ್ರೀಗುರು ಚೈತನ್ಯ ಸೇವಾಶ್ರಮ ದ ಹೊನ್ನಯ್ಯ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!