September 6, 2026
Uncategorizedಗ್ರಾಮಾಂತರ ಸುದ್ದಿ

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

ಅಳದಂಗಡಿ:-. ಅನಾಥವಾಗಿ ತಿರುಗಾಡುತ್ತಿದ್ದ ವಯೋವೃದ್ಧ
ರೋವ೯ರನ್ನು ಅಳದಂಗಡಿ ಹಿಂದೂ ಆಲಡ್ಕ ಕ್ಷೇತ್ರ ಸಂಘಟನೆಯವರು ಜ.22 ರಂದು ಶ್ರೀಗುರು ಚೈತನ್ಯ ಸೇವಾ ಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಬಾಡ ಎಂಬ ವಯೋ ವೃದ್ದರು ನಿರ್ಗತಿಕರಾಗಿ ಹಲವಾರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳ ಮುಂಬಾಗ ,ಮರಗಳ ಕೆಳಗೆ ಹೀಗೆ ಅನಾಥವಾಗಿ ಇರುತ್ತಿದ್ದರು. ಯಾರಿಂದಲೂ ಕೈ ಚಾಚದೆ ,ಯಾರಿಗೂ ಕಿರಿಕಿರಿ ಉಂಟು ಮಾಡದೆ ಸ್ವಾಭಿಮಾನಿಯಾಗಿದ್ದು ಬಾಡಜ್ಜ ಎಂದು ಸಾರ್ವಜನಿಕರಿಂದ ಕರೆಯಲ್ಪಡುತ್ತಿದ್ದರು. ಸ್ಥಳೀಯರು ನೀಡಿದ ಅನ್ನ ಆಹಾರ ಸೇವಿಸುತ್ತಾ ಇದ್ದರು ಇತ್ತೀಚೆಗೆ ಕೆಲವು ದಿನಗಳಿಂದ ವಿಪರೀತವಾಗಿ ಚೈತನ್ಯ ಕಳೆದುಕೊಂಡಿದ್ದು ಇದನ್ನರಿತ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ಸಮಾಜ ಸೇವಾ ಸಂಘಟನೆಯು ಅಳದಂಗಡಿ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿ ವೇಣೂರು ಗುಂಡೂರಿಯ ಶ್ರೀ ಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯ ಕುಲಾಲ್ ಕಾಟಿಪಳ್ಳ ರ ಮಾರ್ಗದರ್ಶನ ದಂತೆಯೇ ವೇಣೂರಿನ ಪೋಲೀಸ್ ಠಾಣೆಗೆ ಮಾಹಿತಿ ನೀಡಿ ವೀರಕೇಸರಿ ಬಳಂಜ ಇವರ ಅಂಬುಲೆನ್ಸ್ ನಲ್ಲಿ ಕರೆದೊಯ್ದು ವೇಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಬಳಿಕ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ಸೇರಿಸಲಾಯಿತು .ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್ ಮತ್ತು ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ಪೂರ್ಣಿಮ ಜೆ , ಗ್ರಾ. ಪಂ. ಸದಸ್ಯರಾದ ಹರೀಶ್ ಆಚಾರ್ಯ ಮಿತ್ತರೋಡಿ, ಅಳದಂಗಡಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕೊರಗಪ್ಪ , ಸಾಮಾಜಿಕ ಕಾರ್ಯಕರ್ತೆ ಹರಿಣಿ ಲಕ್ಷ್ಮಣ ಪೂಜಾರಿ ,ಕೀರ್ತನ್ ಇವರುಗಳು ಸಹಕರಿಸಿದರು.ಈ ಅನಾಥ ವಯೋ ವೃದ್ದರ ಬಂಧುಬಳಗ ದವರ ಮಾಹಿತಿ ಇದ್ದಲ್ಲಿ ವೇಣೂರು ಪೋಲೀಸ್ ಠಾಣೆಗೆ ನೀಡಿ ಸಹಕರಿಸಬೇಕು ಎಂದು ಶ್ರೀಗುರು ಚೈತನ್ಯ ಸೇವಾಶ್ರಮ ದ ಹೊನ್ನಯ್ಯ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

Related posts

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಗ್ನಿವೀರ್ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!