25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಮಕಾರಿಯಾಗಿ ಆರ್ಯ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಜ.28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಲೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹೇಳಿದರು.

ಅವರು ಜ.23ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಅನುಷ್ಠಾನ ಶಿಬಿರದಲ್ಲಿ ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ನಡ, ನಾವೂರು, ಮತ್ತು ಇಂದಬೆಟ್ಟು ಗ್ರಾಮಗಳ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳು ಭಾಗವಹಿಸಿ ಮಾಹಿತಿ ಪಡೆಯಬಹುದು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.

ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾದ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೌಮ್ಯ ಲಾಯಿಲ, ಮೇರಿಟ ಪಿಂಟೋ, ಯತೀಶ್ ಧರ್ಮಸ್ಥಳ, ವೀರಪ್ಪ ಮೋಯಿಲಿ, ವಾಸುದೇವ ಭಟ್, ಉಪಸ್ಥಿತರಿದ್ದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು ಸ್ವಾಗತಿಸಿ, ಶ್ರೀಮತಿ ವಂದನಾ ಭಂಡಾರಿ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!