27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!