22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
error: Content is protected !!