25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಅಳದಂಗಡಿ ಕೆದ್ದು ಪರಿಸರದಲ್ಲಿ ಬಾಡ ಎಂಬ ವಯೋವೃದ್ದರು ನಿರ್ಗತಿಕರಾಗಿ ಹಲವಾರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳ ಮುಂಬಾಗ ,ಮರಗಳ ಕೆಳಗೆ ಹೀಗೆ ಅನಾಥವಾಗಿ ಇರುತ್ತಿದ್ದರು. ಯಾರಿಂದಲೂ ಕೈ ಚಾಚದೆ ,ಯಾರಿಗೂ ಕಿರಿಕಿರಿ ಉಂಟು ಮಾಡದೆ ಸ್ವಾಭಿಮಾನಿಯಾಗಿದ್ದು ಬಾಡಜ್ಜ ಎಂದು ಸಾರ್ವಜನಿಕರಿಂದ ಕರೆಯಲ್ಪಡುತ್ತಿದ್ದರು.

ಸ್ಥಳೀಯರು ನೀಡಿದ ಅನ್ನ ಆಹಾರ ಸೇವಿಸುತ್ತಿದ್ದರು. ಇತ್ತೀಚೆಗೆ ಕೆಲವು ದಿನಗಳಿಂದ ವಿಪರೀತವಾಗಿ ಚೈತನ್ಯ ಕಳೆದುಕೊಂಡಿದ್ದು ಇದನ್ನರಿತ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ಸಮಾಜ ಸೇವಾ ಸಂಘಟನೆಯು ಅಳದಂಗಡಿ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿ ವೇಣೂರು ಗುಂಡೂರಿಯ ಶ್ರೀ ಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯ ಕುಲಾಲ್ ಕಾಟಿಪಳ್ಳ ಹಾಗೂ ವೇಣೂರಿನ ಪೋಲೀಸ್ ಠಾಣೆಗೂ ಕೂಡ ಮಾಹಿತಿ ನೀಡಿ ವೀರಕೇಸರಿ ಬಳಂಜ ಇವರ ಅಂಬುಲೆನ್ಸ್ ನಲ್ಲಿ ಕರೆದೊಯ್ದು ವೇಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿದರು. ಬಳಿಕ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ಸೇರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್,ಅಳದಂಗಡಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಮತಿ ಪೂರ್ಣಿಮ .ಜೆ , ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಆಚಾರ್ಯ ಮಿತ್ತರೋಡಿ, ಅಳದಂಗಡಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಕೊರಗಪ್ಪ , ಸಾಮಾಜಿಕ ಕಾರ್ಯಕರ್ತೆ ಹರಿಣಿ ಲಕ್ಷ್ಮಣ ಪೂಜಾರಿ ,ಕೀರ್ತನ್ ಇವರುಗಳು ಸಹಕರಿಸಿದರು.

ವಯೋವೃದ್ದರಾದ ಬಾಡಜ್ಜರವರ ಬಂಧುಬಳಗದವರ ಮಾಹಿತಿ ಇದ್ದಲ್ಲಿ ವೇಣೂರು ಪೋಲೀಸ್ ಠಾಣೆಗೆ ನೀಡಿ ಸಹಕರಿಸಬೇಕು ಎಂದು ಶ್ರೀಗುರು ಚೈತನ್ಯ ಸೇವಾಶ್ರಮದ ಹೊನ್ನಯ್ಯ ರವರು ಈ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!