23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಮಕಾರಿಯಾಗಿ ಆರ್ಯ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಜ.28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಲೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಹೇಳಿದರು.

ಅವರು ಜ.23ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಅನುಷ್ಠಾನ ಶಿಬಿರದಲ್ಲಿ ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ, ನಡ, ನಾವೂರು, ಮತ್ತು ಇಂದಬೆಟ್ಟು ಗ್ರಾಮಗಳ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳು ಭಾಗವಹಿಸಿ ಮಾಹಿತಿ ಪಡೆಯಬಹುದು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.

ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ಈ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾದ್ಯಕ್ಷ ಶೇಖರ್ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ , ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೌಮ್ಯ ಲಾಯಿಲ, ಮೇರಿಟ ಪಿಂಟೋ, ಯತೀಶ್ ಧರ್ಮಸ್ಥಳ, ವೀರಪ್ಪ ಮೋಯಿಲಿ, ವಾಸುದೇವ ಭಟ್, ಉಪಸ್ಥಿತರಿದ್ದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ನೇಮಿರಾಜ್ ಕಿಲ್ಲೂರು ಸ್ವಾಗತಿಸಿ, ಶ್ರೀಮತಿ ವಂದನಾ ಭಂಡಾರಿ ಧನ್ಯವಾದವಿತ್ತರು.

Related posts

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
error: Content is protected !!