July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya
error: Content is protected !!