25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

ಮಡಂತ್ಯಾರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಲೋಕಾರ್ಪಣೆಯ ಮೊದಲ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀರಾಮೋತ್ಸವ ಕಾರ್ಯಕ್ರಮವು ಜ. 22 ರಂದು ಗಣಪತಿ ಮಂಟಪ, ಮಡಂತ್ಯಾರಿನಲ್ಲಿ ನಡೆಯಿತು.

ಬಳಿಕ ಗೋಪೂಜೆ, ದೀಪಾಲಂಕಾರ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಹಾಗೂ ಮಹಿಳಾ ಭಜನಾ ತಂಡ ಪಾರೆಂಕಿ ರವರಿಂದ ಭಜನೆ ಕಾರ್ಯಕ್ರಮ ನಡೆಯಿತು.

ಸರಸ್ವತಿ ಭಜನಾ ಮಂಡಳಿಯ ಭಜನಕಾರರಿಂದ ಭಜನಾ ಸೇವೆ ನಡೆಯಿತು. ಗೋ ಪೂಜೆ ಮತ್ತು ಹಣತೆ ಹಚ್ಚಿ ವಿಜೃಂಭಣೆಯಿಂದ ಸಂಭ್ರಮಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾರ್ಯಕರ್ತರಾದ ಪುರುಷೋತ್ತಮ ರೈ ಅರ್ಮುಡ ವಹಿಸಿದ್ದರು. ಗಣೇಶ್ ಕಾರ್ಣಿಕ್ ಮಾಜಿ ವಿಧಾನ ಪರಿಷತ್ ಸದಸ್ಯರು, ಶ್ರೀರಾಮ ಮಂದಿರ ಹೋರಾಟದ ವಿಷಯವನ್ನು ಹಾಗೂ, ಹಿಂದೂ ಸಮಾಜದ ಮುಂದಿರುವ ಸವಾಲುಗಳು, ಮುಂದೆ ಎದುರಿಸಬೇಕಾದ ರೀತಿಯನ್ನು ವಿವರಿಸಿದರು. ವಿ. ಹಿಂ. ಪ. ತಾಲೂಕು ಕಾರ್ಯದರ್ಶಿ ಮೋಹನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷೆ ರೂಪಾ ಮತ್ತು ಸದಸ್ಯರು ಮತ್ತು ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya
error: Content is protected !!