September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

ಅಳದಂಗಡಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಡಾ. ಆನಂದ ಕೆ. IAS ಅಳದಂಗಡಿ ಗ್ರಾ. ಪಂಗೆ ಭೇಟಿ ನೀಡಿ, ಸದ್ರಿ ಗ್ರಾ. ಪಂ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸರಕಾರಿ ಪ್ರೌಢ ಶಾಲಾ ಶೌಚಾಲಯ, ಎನ್ಆರ್ ಎಲ್ ಎಮ್ ಶೆಡ್ ಸಮುದಾಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಲಾ ಭೇಟಿ ವೇಳೆ ಎಸ್. ಎಸ್. ಎಲ್. ಸಿ ಮಕ್ಕಳೊಂದಿಗೆ ಪರೀಕ್ಷೆಯ ತಯಾರಿ ಕುರಿತು ಸಂವಾದ ನಡೆಸಿದರು.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಗ್ರಾ. ಪಂ ಭೇಟಿ ಸಂದರ್ಭ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ನೀಡಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್, ನರೇಗಾದ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರಿಮತಿ ಸಫಾನ, ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ,ತಾಂತ್ರಿಕ ಸಂಯೋಜಕರು ( ಸಿವಿಲ್) ನಿತಿನ್ ರೖ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ)ಪ್ರಾರ್ಥನಾ, ಲೀಸಾ ಡೆ ಸಾ, ತಾಲೂಕು ಐಇಸಿ ಸಂಯೋಜಕರು, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!