July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!