22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya
error: Content is protected !!