25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya
error: Content is protected !!