22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

ಮಿತ್ತಬಾಗಿಲು ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಜ.23 ರಂದು ಕೊಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಿತು.

ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ಮಾತನಾಡಿ ಸ್ವಚ್ಛತೆ ತಮ್ಮ ಮನೆಯಿಂದ ಪ್ರಾರಂಭವಾಗಬೇಕು. ಶಾಲಾ ಮಕ್ಕಳು ತಮ್ಮ ಮನೆಯಿಂದ ಒಣ ಕಸವನ್ನು ಶಾಲೆಗೆ ತರಲು ಒಂದು ದಿನ ನಿಗದಿ ಮಾಡಿ ಕಸ ವಿಲೇವಾರಿ ಮಾಡಲು ವಿನೂತನ ಪ್ರಯತ್ನ ಗ್ರಾಮ ಪಂಚಾಯತ್ ಮಾಡಿದೆ ಇದಕ್ಕೆ ಗ್ರಾಮಸ್ಥರೆಲ್ಲರ ಸಹಕಾರ ನೀಡಬೇಕು. ಎಲ್ಲಂದೆರೆಲ್ಲಿ ಕಸ ಎಸೆದು ಬೇರೆಯವರಿಗೆ ಸಮಸ್ಯೆ ತಂದೊಡ್ಡುವುದು ತಪ್ಪು.ಸ್ವಚ್ಛತೆ ಜೀವನದ್ದುದ್ದಕ್ಕು ಅಳವಡಿಸಬೇಕು. ಸ್ವಚ್ಛತೆ ಕಾಪಾಡಲು ನಿಮ್ಮ ಗ್ರಾಮ ಯಶಸ್ವಿಯಾಗಲಿ ಎಂದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಚಂದ್ರ, ಕಾಜೂರು ದರ್ಗಾ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಮುಸ್ಲಿಂ ಪಾದೆಗುತ್ತು, ಜೆ ಎಚ್ ಅಬ್ಬಾಸ್ ಕಾಜೂರು, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಶ್ರೀಮತಿ ರಶ್ಮಿ, ಶೌರ್ಯ ವಿಪತ್ತು ನಿರ್ವಹಣೆ ಸಮಿತಿ ಲೋಕೇಶ್ ಪೂಜಾರಿ, ಸುಜ್ಞಾನ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ವತ್ಸಲ, ಎಂಬಿಕೆ ಶ್ರೀಮತಿ ಸುಷ್ಮಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಿಜಯ, ಸದಸ್ಯರುಗಳಾದ ರಾಮಣ್ಣ ಕುಂಬಾರ, ಚಂದ್ರಶೇಖರಗೌಡ, ಅಹಮದ್ ಕಬೀರ್, ಸಾಹುಲ್ ಹಮೀದ್, ಶ್ರೀಮತಿ ಮೋಹಿನಿ, ಶ್ರೀಮತಿ ಶಾಂಭವಿ , ಶ್ರೀಮತಿ ಚೇತನ, ರಿಕ್ಷಾ ಚಾಲಕರ ಸಂಘದ ಸುರೇಶ್ ಕುಕ್ಕಾವು, ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರುಗಳು, ಆರೋಗ್ಯ ಕಾರ್ಯಕರ್ತೆ, ಶ್ರೀಮತಿ ಜೀನಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!