July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

ಮಿತ್ತಬಾಗಿಲು ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಜ.23 ರಂದು ಕೊಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಿತು.

ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ಮಾತನಾಡಿ ಸ್ವಚ್ಛತೆ ತಮ್ಮ ಮನೆಯಿಂದ ಪ್ರಾರಂಭವಾಗಬೇಕು. ಶಾಲಾ ಮಕ್ಕಳು ತಮ್ಮ ಮನೆಯಿಂದ ಒಣ ಕಸವನ್ನು ಶಾಲೆಗೆ ತರಲು ಒಂದು ದಿನ ನಿಗದಿ ಮಾಡಿ ಕಸ ವಿಲೇವಾರಿ ಮಾಡಲು ವಿನೂತನ ಪ್ರಯತ್ನ ಗ್ರಾಮ ಪಂಚಾಯತ್ ಮಾಡಿದೆ ಇದಕ್ಕೆ ಗ್ರಾಮಸ್ಥರೆಲ್ಲರ ಸಹಕಾರ ನೀಡಬೇಕು. ಎಲ್ಲಂದೆರೆಲ್ಲಿ ಕಸ ಎಸೆದು ಬೇರೆಯವರಿಗೆ ಸಮಸ್ಯೆ ತಂದೊಡ್ಡುವುದು ತಪ್ಪು.ಸ್ವಚ್ಛತೆ ಜೀವನದ್ದುದ್ದಕ್ಕು ಅಳವಡಿಸಬೇಕು. ಸ್ವಚ್ಛತೆ ಕಾಪಾಡಲು ನಿಮ್ಮ ಗ್ರಾಮ ಯಶಸ್ವಿಯಾಗಲಿ ಎಂದರು.

ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ ಚಂದ್ರ, ಕಾಜೂರು ದರ್ಗಾ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಮುಸ್ಲಿಂ ಪಾದೆಗುತ್ತು, ಜೆ ಎಚ್ ಅಬ್ಬಾಸ್ ಕಾಜೂರು, ಎಸ್ ಕೆ ಡಿ ಆರ್ ಡಿ ಪಿ ಸೇವಾ ಪ್ರತಿನಿಧಿ ಶ್ರೀಮತಿ ರಶ್ಮಿ, ಶೌರ್ಯ ವಿಪತ್ತು ನಿರ್ವಹಣೆ ಸಮಿತಿ ಲೋಕೇಶ್ ಪೂಜಾರಿ, ಸುಜ್ಞಾನ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ವತ್ಸಲ, ಎಂಬಿಕೆ ಶ್ರೀಮತಿ ಸುಷ್ಮಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ವಿಜಯ, ಸದಸ್ಯರುಗಳಾದ ರಾಮಣ್ಣ ಕುಂಬಾರ, ಚಂದ್ರಶೇಖರಗೌಡ, ಅಹಮದ್ ಕಬೀರ್, ಸಾಹುಲ್ ಹಮೀದ್, ಶ್ರೀಮತಿ ಮೋಹಿನಿ, ಶ್ರೀಮತಿ ಶಾಂಭವಿ , ಶ್ರೀಮತಿ ಚೇತನ, ರಿಕ್ಷಾ ಚಾಲಕರ ಸಂಘದ ಸುರೇಶ್ ಕುಕ್ಕಾವು, ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರುಗಳು, ಆರೋಗ್ಯ ಕಾರ್ಯಕರ್ತೆ, ಶ್ರೀಮತಿ ಜೀನಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya
error: Content is protected !!