25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವವು ಜ. 29 ರಿಂದ ಫೆ. 02 ರವರೆಗೆ ಪರ್ಯಂತ ವೇದಮೂರ್ತಿ ಬ್ರಹ್ಮಶ್ರೀ ನಡ್ಯಂತಾಡಿ ಶ್ರೀಪಾದ ಪಾಂಗಣ್ಣಾಯರ ಚಾರ್ಯತ್ವದಲ್ಲಿ ಜರಗಲಿರುವುದು.

ಜ.29 ಬೆಳಿಗ್ಗೆ ಗಂಟೆ 8-00ರಿಂದ ಪುಣ್ಯಾಹ ಕಲಶ, 25, 6 ತೆಂಗಿನಕಾಯಿ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಸಾಯಂಕಾಲ ಗಂಟೆ 4-00ಕ್ಕೆ ಧ್ವಜಾರೋಹಣ, ಉತ್ಸವ ಆರಂಭ, ಜ. 30 ಬೆಳಿಗ್ಗೆ ಗಂಟೆ 8-00ರಿಂದ ದೇವರಿಗೆ ನವಕ ಕಲಶ, ದೀಪದ ಬಲಿ, ನಾಗದೇವರಿಗೆ ಆಶ್ಲೇಷ ಬಲಿ, ನಿತ್ಯಬಲಿ, ಧ್ವಜಪೂಜೆ, ಮಹಾಪೂಜೆ, ಸಂಜೆ ಗಂಟೆ 4-0000 ದುರ್ಗಾಪೂಜೆ, ಉತ್ಸವ ಬಲಿ, ರಂಗಪೂಜೆ, ರಕ್ತೇಶ್ವರಿ ನೇಮ, ಮೈಸಂದಾಯ ನೇಮ, ಜ.31 ಬೆಳಿಗ್ಗೆ ಗಂಟೆ 8-00ರಿಂದ ನವಕ ಕಲಶ, ದೀಪದ ಬಲಿ, ನಿತ್ಯ ಬಿಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ, ಮಹಾಪೂಜೆ, ಸಾಯಂಕಾಲ ಗಂಟೆ 4-00ದಿಂದ ಸುತ್ತ ಬಲಿ, ರಂಗಪೂಜೆ, ಮಹಾಪೂಜೆ, ಕೊಡಮಣಿತ್ತಾಯ ನೇಮ, ಪಿಲಿಚಾಮುಂಡಿ ಉತ್ಸವ, ಫೆ.1 ರಂದು ಬೆಳಿಗ್ಗೆ ಗಂಟೆ 9-00ರಿಂದ ನವಕ ಕಲಶ, ಉತ್ಸವ ಬಲಿ, ಮಹಾಪೂಜೆ, ಸಂಜೆ ಗಂಟೆ 4-00ರಿಂದ ಮಹಾ ರಂಗಪೂಜೆ, ಉತ್ಸವ ಬಲಿ, ಮಹಾಪೂಜೆ, ಭೂತ ಬಲಿ, ಕವಾಟ ಬಂಧನ, ಫೆ.2 ಬೆಳಿಗ್ಗೆ ಕವಾಟೋದ್ಘಾಟನೆ, ದೇವರ ದಿವ್ಯದರ್ಶನ, ಶಯನ ಪ್ರಸಾದ, ಶನೈಶ್ಚರ ಪೂಜೆ, ಮಹಾಪೂಜೆ, ಸಂಜೆ ಗಂಟೆ 4-00ರಿಂದ ಯಾತ್ರಾ ಹೋಮ, ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ, ಉತ್ಸವ ಬಲಿ ಅವಭ್ರತ ಸ್ನಾನ, ಮಹಾಪೂಜೆ, ಧ್ವಜ ಅವರೋಹಣ ಮತ್ತು ಅಂಗಣ ಪಂಜುರ್ಲಿ ನೇಮ, ಮಹಾ ರಂಗಪೂಜೆ, ಫೆ. 03 ಬೆಳಿಗ್ಗೆ ಗಂಟೆ 6-00ರಿಂದ ಸಂಪ್ರೋಕ್ಷಣೆ, ದೇವರಿಗೆ 25 ಕಲಶ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ:

ಜ.31ರಂದು ಸಾಯಂಕಾಲ ಗಂಟೆ 6-30ಕ್ಕೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಮತ್ತು ಸ. ಉ. ಪ್ರಾ. ಶಾಲೆ, ಬಡಗಕಾರಂದೂರು, ಅಳದಂಗಡಿ ಇವರಿಂದ ಮನೋರಂಜನಾ (ಡ್ಯಾನ್ಸ್) ಕಾರ್ಯಕ್ರಮ, ಹಾಗೂ ಫೆ.02 ರಂದು ಸಂಜೆ ಗಂಟೆ 6-30ಕ್ಕೆ ಹುರುಂಬಿದೊಟ್ಟು ಅಂಗನವಾಡಿ ಮತ್ತು ಶಿರ್ಲಾಲು ಅಂಗನವಾಡಿ ಮಕ್ಕಳಿಂದ ಹಾಗೂ ಸ್ಥಳೀಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಮನೋರಂಜನಾ ಕಾರ್ಯಕ್ರಮ, ರಾತ್ರಿ ಗಂಟೆ 9-00ಕ್ಕೆ ಶ್ರೀ ಕೃಷ್ಣ ಕಲಾವಿದರು ಉಡುಪಿ ರಾಜ್ಯ ಪ್ರಶಸ್ತಿ ವಿಜೇತ ತಂಡ ಇವರು ಅಭಿನಯಿಸಲಿರುವ ನಾಟಕ “ಆನಿದ ಮನದಾನಿ” ನಡೆಯಲಿದೆ.

Related posts

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya
error: Content is protected !!