23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!