25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಶೋಕ್ ಕುಮಾರ್, ದಾಮೋದರ ಗೌಡ, ಕೇಶವ ಪೂಜಾರಿ, ರವೀಂದ್ರನಾಥ್ ಪಿ, ಪುರುಷೋತ್ತಮ, ಕುಸುಮಾವತಿ, ಶೋಭಾ ವಿಜಯಿಯಾದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಉಜ್ವಲ್ ಕುಮಾರ್, ನವೀನ್ ಕುಮಾರ್, ಪರಮೇಶ್ವರ ಗೌಡ, ಯತೀಶ್ ದಡ್ಡು, ಸಂಜೀವ ಮಲೆಕುಡಿಯ ವಿಜಯಿಯಾದರು.

ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಕೊಯ್ಯೂರು ಸಿಎ ಬ್ಯಾಂಕಿನ ಸಿಇಓ ಅನಂತಕೃಷ್ಣ ರವರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಫಲಿತಾಂಶ ಘೋಷಣೆಗೆ ಕೋರ್ಟ್ ತಡೆಯಿರುವುದರಿಂದ ಕೋರ್ಟು ತೀರ್ಪಿನ ಬಳಿಕ ಘೋಷಣೆಯಾಗಲಿದೆ.

Related posts

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!