25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

ಬಂಗಾಡಿ: ಇಂದುಬೆಟ್ಟು ಗ್ರಾಮದ ಶ್ರೀ ಬಂಗಾಡಿ ಹಾಡಿ ದೈವ ದೈವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ ಬೆದ್ರಬೆಟ್ಟು ಇವರು ನೇಮಕಗೊಂಡಿದ್ದಾರೆ.


ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯು ಬಂಗಾಡಿ ಶ್ರೀ ಹಾಡಿದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ನೇಮಕಗೊಳಿಸಿ ಆದೇಶ ನೀಡಿದ್ದು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಕುಂದ ಸುವರ್ಣ ಅವರು ನೇಮಕಗೊಂಡಿದ್ದಾರೆ.

ಇವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪಂಚಾಯತದ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಮಿತಿಯ ಸದಸ್ಯರಾಗಿ ರವಿ ನೇತ್ರಾವತಿ ನಗರ ಇಂದಬೆಟ್ಟು, ಶ್ರೀಮತಿ ರೋಹಿಣಿ ಧರ್ಣಪ್ಪ ಪೂಜಾರಿ, ಕೊಪ್ಪದ ಕೋಡಿ ಇಂದಬೆಟ್ಟು, ಶ್ರೀಮತಿ ಚಂದ್ರಾವತಿ ಕುಶಾಲಪ್ಪ, ಕಾರಿಂಜ ಮನೆ ನಾವೂರು, ಸುರೇಶ್ ಪರಾರಿ ಮನೆ ನಾವೂರು, ಗಣೇಶ್ ಪ್ರಸಾದ್.ಡಿ ತಾರಕೂಟೇಲು ಇಂದಬೆಟ್ಟು, ದೇಜಪ್ಪ ಗೌಡ ಕುಂಡಡ್ಕ ಮನೆ ನಾವೂರು. ಎಚ್. ರಾಮಕೃಷ್ಣ ಗೌಡ ಹಣಿಬೆಟ್ಟು ಮನೆ ಇಂದಬೆಟ್ಟು ಹಾಗೂ ಪ್ರಧಾನ ಅರ್ಚಕರು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!