July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಉದಯ್ ಕುಮಾರ್ ಲಾಯಿಲ, ಸಮೂಹ ಸಂಪನ್ಮೂಲ ವ್ಯಕ್ತಿ ಗುರುವಾಯನಕೆರೆ ಕ್ಲಸ್ಟರ್ ರಾಜೇಶ್, ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 18 ಸರಕಾರಿ ಶಾಲೆಗಳಲ್ಲಿ 600 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

1-5ನೇ ತರಗತಿ ವಿಜೇತರು: ಪ್ರಥಮ – ಗೌತಮಿ ಮೇಲಂತಬೆಟ್ಟು ಶಾಲೆ, ದ್ವಿತೀಯ -ಅನ್ವಿತಾ ಹಳೆಪೇಟೆ ಶಾಲೆ, ತೃತೀಯ- ಮನೀಶ್ ಹುಣ್ಸೆಕಟ್ಟೆ.

6-7ನೇ ತರಗತಿ ವಿಜೇತರು: ಪ್ರಥಮ – ಸಮೀಕ್ಷಾ ಇಂದಬೆಟ್ಟು ಶಾಲೆ, ದ್ವಿತೀಯ – ಸಂನಾಝ್ – ಹಳೆಪೇಟೆ ಶಾಲೆ,
ತೃತೀಯ – ಜಾನ್ವಿ ಮಾದರಿ ಶಾಲೆ ಬೆಳ್ತಂಗಡಿ,

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ರೋಹಿತಾಕ್ಷ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

Suddi Udaya

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!